Thursday, October 6, 2011




                   ಮಕ್ಕಳ ಬಾನುಲಿ ಕೇಂದ್ರದ ಉದ್ಘಾಟನೆ; ಶಾಸಕರಿಗೆ ಅಭಿನಂದನೆ
   ನಮ್ಮ ಶಾಲೆಯಲ್ಲಿ ಹೊಸದಾಗಿ ವ್ಯವಸ್ಥೆಗೊಳಿಸಲಾದ ಮಕ್ಕಳ ರೇಡಿಯೋ ಕೇಂದ್ರದ ಉದ್ಘಾಟನೆ ಮತ್ತು ಶಾಸಕರಿಗೆ ಅಭಿನಂದನೆ ಆಗಸ್ಟ್ ೨೧ರಂದು ಜರಗಿತು.
    ಶಾಲಾ ಮುಖ್ಯೋಪಾಧ್ಯಾಯರು ಹಾಗೂ ವ್ಯವಸ್ಥಾಪಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಶಾಸಕ ಪಿ.ಬಿ.ಅಬ್ದುಲ್ ರಜಾಕ್ ರೇಡಿಯೋ ಕೇಂದ್ರ ಉದ್ಘಾಟಿಸಿ ಮಾತನಾಡಿ,ಶಾಲೆಗಳಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಗಳು ಮಕ್ಕಳ ಚಟುವಟಿಕಗಳಿಗೆ ಸ್ಪೂರ್ತಿ ತುಂಬುವುದರೊಂದಿಗೆ ಬೌದ್ಧಿಕ ವಿಕಾಸಕ್ಕೆ ಕಾರಣವಾಗುತ್ತದೆ ಎಂದರು.
    ಎಣ್ಮಕಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರನ್ನು ಶಾಲಾ ಆಡಳಿತ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಗ್ರಾಮ ಪಂಚಾಯತಿನ ಉಪಾಧ್ಯಾಕ್ಷೆ ಆಯಿಷಾ.ಎ.ಎ.,ಗ್ರಾಮ ಪಂಚಾಯತಿನ ಸದಸ್ಯ ರವಿ.ಕೆ.,ಉಪಜಿಲ್ಲಾ ಶಿಕ್ಷಣಾಧಿಕಾರಿ ಕರುಣಾಕರ ಆನಂತಪುರ, ಡಾ.ಮೋಹನ್ ಕುಮಾರ್ ವೈ.ಎಸ್.,ಶಾಲಾ ವ್ಯವಸ್ಥಾಪಕ ಹೃಷಿಕೇಶ, ಮಾತೃ ಸಂಗಮದ
ಅಧ್ಯಕ್ಷೆ ರಾಧಿಕಾ ಉಪಸ್ಥಿತರಿದ್ದರು.
     ಈ ಸಂದರ್ಭ ಸ್ವರ್ಗ ರಸ್ತೆಯ ದುರಸ್ತಿಗೆ ಸಂಬಂಧಿಸಿದ ಮನವಿಯನ್ನು ಸಂಬಂಧಪಟ್ಟವರಿಗೆ ಸಲ್ಲಿಸಲಾಯಿತು.ಮುಖ್ಯ ಶಿಕ್ಷಕ ಕೆ.ವೈ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿವೇಕಾನಂದ.ಬಿ.ಕೆ.ವಂದಿಸಿದರು.ವಿದ್ಯಾರ್ಥಿಗಳಾದ ಕುಮಾರಿ ಮೇಘಾ.ಎಸ್.ಎಮ್. ಹಾಗೂ ಮಾಸ್ಟರ್ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment