Monday, December 17, 2012

ಗಾಂಧೀ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ

                 ಸ್ವರ್ಗ ಸ್ವಾಮೀ ವಿವೇಕಾನಂದ ಎ.ಯು.ಪಿ.ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಯವರ ಜನ್ಮ ದಿನವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ  ಶ್ರೀ ಕೆ.ವೈ. ಸುಬ್ರಹ್ಮಣ್ಯ ಭಟ್ ರವರು ಈ ಮಹಾನ್ ವ್ಯಕ್ತಿಗಳ ಭಾವ ಚಿತ್ರಕ್ಕೆ ಪುಷ್ಪಹಾರವನ್ನು ಸಮರ್ಪಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ '' ಮಹಾತ್ಮ ಗಾಂಧಿ ಜೀವನವೇ ನಮಗೆ ಸಂದೇಶ'' ಎಂದು ಹಿತವಚನವಿತ್ತರು. ಕುಮಾರಿ ವೇದದೀಕ್ಷಾ ಹಾಗೂ ಅಕ್ಷತಾ ರವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜೀವನ ಚರಿತ್ರೆಯನ್ನು ಮಂಡಿಸಿದರು. ಸೇವನಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಮಕ್ಕಳು - ಅಧ್ಯಾಪಕರು ಗುಂಪುಗಳಲ್ಲಿ ಶಾಲಾ ಪರಿಸರವನ್ನು ಶುಚಿಗೊಳಿಸಿದರು.




No comments:

Post a Comment