ರಕ್ಷಕ ಶಿಕ್ಷಕ ಸಂಘದ ಮಹಾಸಭೆ
ನಮ್ಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಜರುಗಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ.ಪಿ ಶಿವರಾಮ್ ಭಟ್ರವರು 2014-15 ನೇ ವರ್ಷದ ವರದಿಯನ್ನು ವಾಚಿಸಿದರು. ಕಳೆದ ವರ್ಷದ ಆಯವ್ಯಯ ಲೆಕ್ಕಪತ್ರಗಳನ್ನು ಶಿಕ್ಷಕ ಪದ್ಮನಾಭ.ಆರ್ ರವರು ಮಂಡಿಸಿದರು. ನಂತರ ಶಾಲೆಯಲ್ಲಿರುವ ವಿವಿಧ ವ್ಯವಸ್ಥೆಗಳ ಸ್ಥಿತಿಗತಿಗಳ ಕುರಿತು ಸಂಬಂಧಪಟ್ಟ ಸಂಚಾಲಕ ಶಿಕ್ಷಕರು ಮಾಹಿತಿಯನ್ನಿತ್ತರು.2015-16 ನೇ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳುವ ವಿದ್ಯಾಭ್ಯಾಸ ಪರ ಯೋಜನೆಗಳು ಹಾಗೂ ಕಾಮಗಾರಿಯ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಸ್ವರ್ಗ ಅಂಗನವಾಡಿ ವತಿಯಿಂದ 1 ನೇ ತರಗತಿಗೆ ಸೇರ್ಪಡೆಗೊಂಡ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಗ್ಲಾಸನ್ನು ಅಂಗನವಾಡಿ ಶಿಕ್ಷಕಿ ಚಂದ್ರಾವತಿಯವರು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಲಕ್ಷೀ ಪ್ರೀಯ ಶರಳಾಯರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಶಾಲಾ ವ್ಯವಸ್ಥಾಪಕರಾದ ಶ್ರೀ ಹೃಷಿಕೇಶ ವಿ.ಎಸ್ ಹಾಗೂ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಂಜರಿ ನವೀನ್ ಉಪಸ್ಥಿತರಿದ್ದರು. ಅಪಾರ ಸಂಖ್ಯೆಯಲ್ಲಿ ರಕ್ಷಕರ ಬಳಗವು ನೆರೆದಿತ್ತು. ಶಿಕ್ಷಕ ಕೆ.ಶಿವರಾಮ್ ಭಟ್ ಸ್ವಾಗತಿಸಿ, ಶಿಕ್ಷಕ ವೆಂಕಟ ವಿದ್ಯಾಸಾಗರರು ವಂದನಾರ್ಪಣೆ ಗೈದರು. ಶಿಕ್ಷಕಿ ಶ್ರೀಮತಿ ಗೀತಾಂಜಲಿ ಪ್ರಾರ್ಥಿಸಿ, ಶಿಕ್ಷಕ ಸಚ್ಚಿದಾನಂದ.ಎಸ್ ಕಾರ್ಯಕ್ರಮ ನಿರೂಪಿಸಿದರು.