Wednesday, August 31, 2016



               ಗ್ರಾಮಾಭಿವೃದ್ಧಿ ಯೋಜನೆ ಮಾಹಿತಿ ಕಾರ್ಯಾಗಾರ


ನಮ್ಮ ಶಾಲೆಯಲ್ಲಿ ಧರ್ಮಸ್ಥಳ ಗ್ರ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ, ಆರೋಗ್ಯ ರಕ್ಷಣೆಯ ಮಾಹಿತಿ ಕಾರ್ಯಾಗಾರ ನಡೆತು. ಎಣ್ಮಕಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷೆಯಾದ ಶ್ರೀಮತಿ ರೂಪವಾಣಿ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆಯ ಅಧ್ಯಕ್ಷ ಶ್ರೀ ಗೋಪಾಲ ಶೆಟ್ಟಿ ಇವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಪೆರ್ಲ ಸತ್ಯನಾರಾಯಣ ಪ್ರೌಢ ಶಾಲೆಯ ಶಿಕ್ಷಕ ಉಮೇಶ್ ಹಾಗೂ ಕುಂಬಳೆ-ಕಾಸರಗೋಡಿನ ಯೋಜನಾಧಿಕಾರಿಯಾದ ಶ್ರೀಮತಿ ಚೇತನ ಇವರು ಸಂಪನ್ನೂಲ ವ್ಯಕ್ತಿಯಾಗಿ ಸಹಕರಿಸಿದರು. ಶಿಕ್ಷಕಿ ಶ್ರೀಮತಿ ಗೀತಾ ಕುಮಾರಿ ಇವರು ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದರು.ಈ ಸಂದರ್ಭದಲ್ಲಿ ಅರಣ್ಯ ಪ್ರಶಸ್ತಿ ವಿಜೇತ ಪೆರ್ಲ ಸತ್ಯನಾರಾಯಣ ಪ್ರೌಢ ಶಾಲಾ ಶಿಕ್ಷಕ ಉಮೇಶ್ ಇವರಿಗೆ ನಮ್ಮ ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಂದ ಶಿಕ್ಷಕ ಸಚ್ಚಿದಾನಂದ ಎಸ್ ಮತ್ತು ಶಿಕ್ಷಕ ಎಸ್.ಎನ್ ವೆಂಕಟ ವಿದ್ಯಾಸಾಗರ್ ಶಾಲು ಹೊದಿಸಿ ಫಲ ಪುಷ್ಪ ತಂಬೂಲ ನೀಡಿ ಗೌರವಿಸಲಾಯಿತು. 
          ಮೇಲ್ವಿಚಾರಕ ಮೋಹನ್ ಸರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಸುಕನ್ಯಾ ಇವರು ಎಲ್ಲರನ್ನು ಸ್ವಾಗತಿಸಿ, ಒಕ್ಕೂಟ ಕಾರ್ಯದರ್ಶಿ ಕುಮಾರಿ ರೇವತಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಉಪಹಾರದ ವ್ಯವಸ್ಥೆ ಮಾಡಲಾತು.



No comments:

Post a Comment