ಶಿಕ್ಷಕರ ಸ್ವ ಗೃಹದಲ್ಲಿ ಶಿಕ್ಷಕ ದಿನಾಚರಣೆ
ನಮ್ಮಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಶಿಕ್ಷಕ ದಿನಾಚರಣೆಯ ಅಂಗವಾಗಿ, ಶಾಲೆಯಲ್ಲಿ ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತ ಶಿಕ್ಷಕಿ ಶ್ರೀಮತಿ ಪ್ರೇಮ ಟೀಚರ್ ರವರ ಬಗ್ಗೆ ಗುರುವಂದನಂ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಇನ್ನೋರ್ವ ಶಿಕ್ಷಕ ಶಾಲಾ ಹಳೇ ವಿದ್ಯಾರ್ಥಿ ಎಸ್.ಎನ್.ಎಚ್.ಎಸ್ ಪೆರ್ಲ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತ ಶಿಕ್ಷಕ ಎಸ್.ಕೆ ಸುಬ್ರಹ್ಮಣ್ಯ ಭಟ್ ಪಾಲ್ತಮೂಲೆ ಇವರ ಸ್ವ ಗೃಹಕ್ಕೆ ತೆರಳಿ ಶಾಲು ಹೊದಿಸಿ, ಫಲಪುಷ್ಪ ತಾಂಬೂಲ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತನ್ನ ಬಾಲ್ಯ ಕಾಲದ ಸವಿ ಅನುಭವವನ್ನು ನೆನಪಿಸುತ್ತಾ ಮಕ್ಕಳಿಗೆ ನೀಡುವ ಪ್ರೋತ್ಸಾಹವೇ ಕಲಿಕೆಯ ಔನತ್ಯಕ್ಕೆ ಮೂಲ ಭಯರಹಿತ ವಾತಾವರಣವನ್ನು ರೂಪಿಸುವುದರಿಂದ ಮಕ್ಕಳಿಗೆ ಕಲಿಕೆ ಆಸಕ್ತಿದಾಯಕವಾಗಲು ಸಾಧ್ಯ ಹಾಗೂ ಸಾಕಷ್ಟು ಅವಕಾಶಗಳನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ಅವರು ನುಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪಿ ಶಿವರಾಮ್ ಭಟ್ ರವರು ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಗೀತಾಕುಮಾರಿ ಬಿ. ವಂದಿಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಾಕ್ಷ ಶ್ರೀ ಶ್ರೀಧರ್ ಭಟ್ ಸಜಂಗದ್ದೆ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.
No comments:
Post a Comment